ಬೆಳ್ತಂಗಡಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಹಿತ ಇರುವ ಕರಾವಳಿಯ ಶಾಸಕರುಗಳು ಮನವಿ ಸಲ್ಲಿಸಿದರು.
ಅವಿಭಜಿತ ದಕ್ಷಿಣ ಕನ್ನಡ - ಉಡುಪಿ ಜಿಲ್ಲೆಯ ಶಾಸಕರ ನಿಯೋಗದ ನೇತೃತ್ವವನ್ನು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಹಿಸಿದ್ದರು.
ವಿಧಾನ ಸಭೆಯ ಮುಖ್ಯ ಸಚೇತಕ ಸುನೀಲ್ ಕುಮಾರ್ ಕಾರ್ಕಳ, ಶಾಸಕರುಗಳಾದ ಸಂಜೀವ ಮಠಂದೂರು ಪುತ್ತೂರು, ರಾಜೇಶ್ ನಾಯ್ಕ್ ಬಂಟ್ವಾಳ, ರಘುಪತಿ ಭಟ್ ಉಡುಪಿ, ಉಮಾನಾಥ್ ಕೋಟ್ಯಾನ್ ಮೂಡಬಿದ್ರೆ, ಮಂಗಳೂರಿನ ಶಾಸಕರುಗಳಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇವರುಗಳು ಉಪಸ್ಥಿತರಿದ್ದರು.