Posts

ಹೊಸ ವರ್ಷ ಸಾರ್ವಜನಿಕ ಆಚರಣೆಗೆ ಅವಕಾಶವಿಲ್ಲ: ಆರ್.ಅಶೋಕ್

0 min read


ಬೆಂಗಳೂರು: ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಈ ಬಾರಿ ಅವಕಾಶ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರೊಂದಿಗೆ ತಿಳಿಸಿದರು.

ಕೋವಿಡ್  ಕಾರಣದಿಂದಾಗಿ ವಿಜ್ಞಾನಿಗಳ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಅವರೊಂದಿಗೆ ನಾನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಚರ್ಚೆ ಮಾಡಿದ್ದೇವೆ. ಅದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರವೇ ಈ ವಿಷಯದಲ್ಲಿ ಆದೇಶ ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಹೇಳಿದರು.

ಹೊಟೇಲ್‌ಗಳಲ್ಲಿ ಪಾರ್ಟಿ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ‌ ಕೋವಿಡ್ ಮಾರ್ಗಸೂಚಿ ಪ್ರಕಾರ ಇರಬೇಕು. ಒಟ್ಟು ಸಾಮರ್ಥ್ಯದ ಶೇ 50ರಷ್ಟು ಆಸನಗಳಿಗೆ ಮಾತ್ರ ಅವಕಾಶ ಇರುತ್ತದೆ. ಅಂತರ ಕಾಯ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿಗಾ ವಹಿಸಲಿದೆ. ಹಿಂದೆಲ್ಲಾ ಅದ್ಧೂರಿಯಾಗಿ ‌ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡಿದ್ದೇವೆ. ಈ ಬಾರಿ ಕೊರೊನಾ ಕಾರಣದಿಂದಾಗಿ ಸರ್ಕಾರಕ್ಕೆ ಸಹಕಾರ ನೀಡಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕೋರಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment