Posts

ಫೆ. 19 - 28: ಕಾಜೂರು ಉರೂಸ್ ಮಹಾಸಂಭ್ರಮ ಫೆ. 25: ಬೃಹತ್ ದಿಕ್ರ್ ಹಲ್ಕಾ ಕಾರ್ಯಕ್ರಮಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಜೂರಿಗೆ

1 min read



ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ, ಕಾಜೂರು ದರ್ಗಾ ಶರೀಫ್‌ನಲ್ಲಿ ಪ್ರತೀವರ್ಷ ನಡೆಯುವ ಉರೂಸ್ ಮಹಾಸಂಭ್ರಮವು ಈ ವರ್ಷ ಫೆ.19 ರಿಂದ ಆರಂಭಗೊಂಡು ಫೆ. 28 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ.


ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಮತ್ತು ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ರವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ.

‌ಫೆ. 25 ರಂದು ನಡೆಯುವ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಉಸ್ತಾದ್ ಆಗಮಿಸಲಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶನಿವಾರ ಬೆಳ್ತಂಗಡಿ ಪ್ರವಾಸಿ ಬಂಗಲೆಯಲ್ಲಿ ಕರೆದಿದ್ದ ಮಾದ್ಯಮಗೋಷ್ಟಿಯಲ್ಲಿ ಅವರು ವಿವರ ನೀಡಿದರು.

ಫೆ. 19 ರಂದು ಉರೂಸ್ ಸಮಾರಂಭದ ಉದ್ಘಾಟನೆಯನ್ನು ತಾ| ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ನೆರವೇರಿಸಲಿದ್ದು, ಧ್ವಜಾರೋಹಣವನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ನಡೆಸಲಿದ್ದಾರೆ. 

ಈ ಕಾರ್ಯಕ್ರಮದಲ್ಲಿ ಸಯ್ಯಿದ್ ಕೂರತ್ ತಂಙಳ್ ಅಧ್ಯಕ್ಷತೆ ವಹಿಸಿ ದುಆ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದಲ್ಲಿ ಅನೇಕ ಸಯ್ಯಿದರುಗಳು, ಕಾವಳಕಟ್ಟೆ ಡಾ. ಹಝ್ರತ್, ಸಹಿತ ಪ್ರಮುಖ ಗಣ್ಯರುಗಳು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ತಾಲೂಕಿನ ಮಸ್ಜಿದ್‌ಗಳ ಅಧ್ಯಕ್ಷರುಗಳು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ. 

ಉರೂಸ್ ಪ್ರಯುಕ್ತ 10 ದಿನಗಳಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ- ಕೇರಳದ ಪ್ರಸಿದ್ಧ ವಾಗ್ಮಿಗಳಿಂದ ಧಾರ್ಮಿಕ ಪ್ರವಚನ ನಡೆಯಲಿದೆ. ಈ ಉಪನ್ಯಾಸ ಮಾಲಿಕೆಯನ್ನು ಫೆ. 19 ರಂದು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ ಎಂದರು.


ಫೆ. 25 ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ ಬೃಹತ್ ದಿಕ್ರ್ ಮಜ್ಲಿಸ್ ನಡೆಯಲಿದ್ದು, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಖಾಝಿ ಮಾಣಿ ಉಸ್ತಾದ್ ಸಹಿತ ಹಲವಾರು ವಿದ್ವಾಂಸರುಗಳು, ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ ಸಹಿತ ಅನೇಕ ಸಯ್ಯಿದರುಗಳು, ಉಲಮಾಗಳು, ಸಾಮಾಜಿಕ ಧಾರ್ಮಿಕ ನಾಯಕರುಗಳು ಭಾಗವಹಿಸಲಿದ್ದಾರೆ.


ಫೆ. 28: ಉರೂಸ್ ಸಮಾರೋಪ; ಸರ್ವಧರ್ಮೀಯರ ಸೌಹಾರ್ದ ಸಂಗಮ:


ಫೆ. 28 ರಂದು ಸಂಜೆ ಸರ್ವಧರ್ಮೀಯರ ಸೌಹಾರ್ದ ಸಮಾರಂಭ ನಡೆಯಲಿದ್ದು, ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ.ಎಮ್ ಶಾಫಿ ಸಅದಿ ಬೆಂಗಳೂರು, ಡಾ. ಅಬ್ದುಲ್ ರಶೀದ್ ಝೈನಿ ಸಖಾಫಿ ಅಲ್ಲದೆ ಹಲವಾರು ಧಾರ್ಮಿಕ, ರಾಜಕೀಯ, ಸಾಮಾಜಿಕ ನೇತಾರರು ಹಾಗೂ, ಕೇಂದ್ರದ, ರಾಜ್ಯದ ಸಚಿವರುಗಳು, ಸಂಸದರು, ಶಾಸಕರುಗಳು ಭಾಗವಹಿಸಲಿದ್ದಾರೆ. 

ರಾತ್ರಿ ಉರೂಸ್ ಸಮಾರೋಪದಲ್ಲಿ ವಿಶ್ವವಿಖ್ಯಾತ ವಾಗ್ಮಿ ಲುಕ್ಮಾನುಲ್ ಹಕೀಮ್ ಸಖಾಫಿ ಪುಲ್ಲಾರ ಮುಖ್ಯಪ್ರಭಾಷಣಗೈಯ್ಯಲಿದ್ದಾರೆ. ಮರ್‌ಹೂಮ್ ಕಾಜೂರು ತಂಙಳ್ ಸಹೋದರ ಸಯ್ಯಿದಲವಿ ಕೋಯ ಜಮಲುಲ್ಲೈಲಿ ತಂಙಳ್ ಕೇರಳ ಭಾಗಿಯಾಗಲಿದ್ದಾರೆ. ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಬೆಲ್ಲದಗಂಜಿ ವಿತರಣೆ, ಉರೂಸ್ ಕೊನೆಯದಾಗಿ ಸಾರ್ವಜನಿಕರಿಗೆ ಮಹಾ ಅನ್ನದಾನ ನಡೆಯಲಿದೆ. 

ಪತ್ರಿಕಾಗೋಷ್ಠಿಯಲ್ಲಿ  ಕಿಲ್ಲೂರು ಆಡಳಿತ ಸಮಿತಿ ಉಪಾಧ್ಯಕ್ಷ ಎಂ ಅಬೂಬಕ್ಕರ್ ಮಲ್ಲಿಗೆಮನೆ, ಉರೂಸ್ ಸಮಿತಿ ಪ್ರ.‌ಕಾರ್ಯದರ್ಶಿ 

ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಉರೂಸ್ ಸಮಿತಿ 

ಜೊತೆ ಕಾರ್ಯದರ್ಶಿ ಎಂ.ಎ ಕಾಸಿಂ ಮಲ್ಲಿಗೆಮನೆ ಕಿಲ್ಲೂರು, ಉರೂಸ್ ಸಮಿತಿ ಕೋಶಾಧಿಕಾರಿ ಕೆ.ಯು ಮುಹಮ್ಮದ್ ಕಮಾಲ್ ಕಾಜೂರು‌ ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment