Posts

ಕೊಕ್ಕಡದಲ್ಲಿ ಆಕಸ್ಮಿಕ ಬೆಂಕಿ ಅವಘಡ: 3 ಕ್ವಿಂಟಾಲ್‌ಗೂ ಮಿಕ್ಕಿ ರಬ್ಬರ್, ದಾಖಲೆ ಪತ್ರಗಳು ಬೆಂಕಿಗಾಹುತಿ

1 min read

ಬೆಳ್ತಂಗಡಿ: ಇಲ್ಲಿಯ ಪಿಜಿನಡ್ಕ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಬುಧವಾರ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್‌ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ಜ.13 ರಂದು ನಡೆದಿದೆ.

ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರ ಅವರಿಗೆ ಹೊಸಮನೆ ನಿರ್ಮಾಣವಾಗುತ್ತಿದ್ದು, ಮನೆ ಮಂದಿ ಕೆಲಸಮಯದಿಂದ ಇದೇ ಮನೆಗೆ ತಾಗಿಕೊಂಡಿರುವ ಕೊಟ್ಟಿಗೆಯಲ್ಲಿ ಮನೆಯ ಎಲ್ಲ ವಸ್ತುಗಳ ಸಮೇತ ನೆಲೆಸಿದ್ದರು.  ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು.


ಅಲ್ಲದೆ ಮನೆಯೊಳಗಡೆ ರಬ್ಬರ್ ಶೀಟ್‌ನ ದಾಸ್ತಾನು, ಮನೆಗೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳು ಎಲ್ಲವೂ ಇದೇ ಕೊಟ್ಟಿಗೆಯಲ್ಲಿ ಇತ್ತು. ಅಡುಗೆ ಕೋಣೆಯಲ್ಲಿ ರಬ್ಬರ್ ಶೀಟನ್ನು ಕೂಡ ಒಣಗಲು ಹಾಕಿದ್ದರು. ಹೀಗಿರುವಂತೆ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹತ್ತಿಕೊಂಡು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿ ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್‌ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದರಾದರೂ, ಅದಾಗಲೇ 3 ಕ್ವಿಂಟಾಲ್‌ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30ಸಾವಿರ ನಗದು ಬೆಂಕಿಗಾಹುತಿಯಾಗಿದೆ. ಇದರಿಂದಾಗಿ  ಸುಮಾರು 1.50 ಲಕ್ಷ ರೂ ನಷ್ಟ ಉಂಟಾಗಿರಬಹುದೆಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ.

ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರುಗಳಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಇವರುಗಳು  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಮಂದಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ದೊರೆಯಬಹುದಾದ ಪರಿಹಾರಕ್ಕಾಗಿ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment