Posts

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವಿರೋಧ ಆಯ್ಕೆ

0 min read

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕಿನ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ , ಈಗಾಗಲೇ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿ ಇದೀಗ ನಾಳ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಜನಾರ್ದನ ಪೂಜಾರಿ, ಅಂಬಾ ಆಳ್ವ, ದಿನೇಶ್ ಕುಮಾರ್ ಕೆ., ವಿಜಯ ಎಚ್. ಪ್ರಸಾದ್, ಉಮೇಶ್ ಕೇಲ್ದಡ್ಕ, ರಾಜೇಶ್ ಶೆಟ್ಟಿ ಹಾಗೂ ವೇ.ಮೂ. ರಾಘವೇಂದ್ರ ಅಸ್ರಣ್ಣ( ಪ್ರದಾನ ಅರ್ಚಕರು) ಆಯ್ಕೆಯಾದರು.

ಆಡಳಿತಾಧಿಕಾರಿ ಮಲ್ಲೇಶ್ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.‌ ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment