Posts

ನ‌ಗರದಲ್ಲಿ ಮಕ್ಕಳ ಸಮೀಕ್ಷೆ ಬಗ್ಗೆ ವಿಶೇಷ ಸಭೆ ಸಮೀಕ್ಷೆಗೆ ಸಹಕರಿಸುವಂತೆ ಮನವಿ

1 min read

ಬೆಳ್ತಂಗಡಿ: ಮಕ್ಕಳ ಸಮೀಕ್ಷೆಯ ಪ್ರಗತಿಯ ತಿಳಿಯುವ ನಿಟ್ಟಿನಲ್ಲಿ ಬುಧವಾರ ಪಟ್ಟಣ ಪಂಚಾಯತ್ ನಲ್ಲಿ ವಿಶೇಷ ಸಭೆ ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷೆ  ರಜನಿ ಕುಡ್ವ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ಕೆಲವು ವಾರ್ಡ್ ಗಳಲ್ಲಿ ಗಣತಿದಾರರು ಹಾಗೂ ಶಿಕ್ಷಕರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ ವರದಿ ನೀಡುತ್ತಿದ್ದಾರೆ. ಕೆಲವರು ಸಮೀಕ್ಷೆ ವೇಳೆ ಪಡಿತರ ಚೀಟಿ ತಕ್ಷಣಕ್ಕೆ  ಲಭಿಸದೆ ಇರುವ ಕಾರಣ ವಿಳಂಬವಾಗುತ್ತಿದ್ದು ಎಲ್ಲ ಸಾರ್ವಜನಿಕರು ತಮ್ಮ ಪಡಿತರ ಚೀಟಿಯನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಹಾಗಾದಲ್ಲಿ ‌ಮಾತ್ರ ತ್ವರಿತ ಕೆಲಸ ಮತ್ತು ಉದ್ದೇಶಿತ ಗುರಿ ಸಾಧಿಸಲು ಅನುಕೂಲವಾಗಲಿದೆ ಎಂದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಹೆಚ್ ಮಾತನಾಡಿ, ಇಂದಿನಿಂದ ಎಲ್ಲಾ ವಾರ್ಡ್ ಗಳಲ್ಲಿ ಗಣತಿದಾರರು  ಸಂಚರಿಸಿ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಆದುದರಿಂದ ಎಲ್ಲರೂ ಈ ಗಣತಿಗೆ ಸಹಕಾರ ನೀಡಬೇಕೆಂದು ಕೇಳಿಕೊಂಡರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಸುಭಾಷ್ ಜಾದವ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ನಗರದ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಪಟ್ಟಣ ಪಂಚಾಯತಿ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ಸಮುದಾಯ ಸಂಘಟನಾಧಿಕಾರಿ ವೆಂಕಟರಮಣ ಶರ್ಮ ಸ್ವಾಗತಿಸಿ ವಂದಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment