Posts

ಪದವಿ ವಿದ್ಯಾರ್ಥಿನಿ ಸೌಮ್ಯಾ ಆಚಾರ್ಯ ಆತ್ಮಹತ್ಯೆಗೆ ಶರಣು

0 min read

 


ಬೆಳ್ತಂಗಡಿ: ವೇಣೂರು ಬಳಿಯ ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿ ಸೌಮ್ಯಾ (19ವ.) ಅವರು ನೇಣು ಬಿಗಿದು ಶುಕ್ರವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಪದವಿ ಓದುತ್ತಿದ್ದ ಈಕೆ ಕೋವಿಡ್ ನಿಯಮಾವಳಿಯ ರಜಾ ಅವಧಿ ಮುಗಿದ ಬಳಿಕವೂ  ತರಗತಿಗೆ ಹಾಜರಾಗದೆ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.


ಪೂರ್ವಾಹ್ನ ಎಂದಿನಂತೆ ಮನೆಯಲ್ಲಿ ಉಪಹಾರ ಮುಗಿಸಿದ್ದ ಅವರು ಬಳಿಕ ಕಾಣದಾಗಿದ್ದರು. ಮನೆಯವರು ಹುಡುಕಾಡಿದಾಗ ಆಕೆ ಮನೆಯ  ಮೇಲ್ಛಾವಣಿಯಲ್ಲಿ ಚೂಡಿದಾರದ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೃತ್ಯವೆಸಗಿಕೊಂಡಿರುವುದು ಕಂಡುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಯುತ್ತಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment