ಬೆಳ್ತಂಗಡಿ: ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಶುಕ್ರವಾರ ಮಧ್ಯಾಹ್ನ ವೇಳೆ ನಡೆದ ಅಪಘಾತದಲ್ಲಿ ಬೈಕ್ನಲ್ಲಿದ್ದ ಸಹ ಸವಾರೆ ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆ ನಿವಾಸಿ ಸೆಕೀನಾ ಅವರು ದಾರುಣವಾಗಿ ಮೃತಪಟ್ಟಿದ್ದಾರೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೊಟೇಲ್ ಬಳಿ ಘಟನೆ ನಡೆದಿದೆ.
ಸರಳಿಕಟ್ಟೆ ನಿವಾಸಿ ರಫೀಕ್ ಎಂಬವರ ಪತ್ನಿ ಸಕೀನಾ ತೆಕ್ಕಾರು ಗ್ರಾ.ಪಂ ಸದಸ್ಯ, ತನಲ್ ಈವೆಂಟ್ ಮೆನೇಜ್ಮೆಂಟ್ ಸಂಸ್ಥೆಯ ಮಾಲಕ ಹಕೀಮ್ ಅವರ ಸಹೋದರಿಯಾಗಿದ್ದಾರೆ.
ಬಿ.ಸಿ.ರೋಡ್ ನಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್ ಮಧ್ಯೆ ಡಿಕ್ಕಿ ನಡೆದಿದೆ.ಈ ವೇಳೆ ಸವಾರ, ಸಕೀನಾರ ಪತಿ ರಫೀಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಘಟನೆ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.