Posts

ಆದಿವಾಸಿಗಳಿಗೆ ಅವರವರ ಪ್ರದೇಶದಲ್ಲೇ ಚುಚ್ಚುಮದ್ದಿಗೆ ವ್ಯವಸ್ಥೆ ಮಾಡಲು ಒತ್ತಾಯ

1 min read


ಬೆಳ್ತಂಗಡಿ: ಬಾಂಜಾರು ಮಲೆ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ತಾಲೂಕಿನ ದಟ್ಟ ಕಾನನದಲ್ಲಿ ವಾಸಿಸುತ್ತಿರುವ ಆದಿವಾಸಿಗಳಿಗೆ ಅವರವರ ಪ್ರದೇಶಗಳಲ್ಲಿಯೇ ವ್ಯಾಕ್ಸಿನ್ ಹಾಕಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಗ್ರಹಿಸಿದೆ.

ಬೆಳ್ತಂಗಡಿ ತಾಲೂಕಿನ 11 ಗ್ರಾಮಗಳು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಒಳಪಡುತ್ತದೆ. ಇಲ್ಲಿನ ದಟ್ಟ ಅರಣ್ಯದಲ್ಲಿ ಶತಮಾನಗಳಿಂದ ಆದಿವಾಸಿ ಸಮುದಾಯದ ಮಲೆಕುಡಿಯ ಸಮುದಾಯದ ಜನರು ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪಟ್ಟಣ ಪ್ರದೇಶದಿಂದ 8-10 ಕಿ.ಮೀ ದೂರದಲ್ಲಿರುವ ಇವರಿಗೆ ಅವರವರ ಪ್ರದೇಶಗಳಲ್ಲಿಯೇ ವ್ಯಾಕ್ಸಿನ್ ನೀಡಬೇಕು. ಕಳೆದ ಎರಡು ಅವಧಿಯಲ್ಲಿಯೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿ ಸಮುದಾಯದ ಜನರಿಗೆ ಕೋವಿಡ್ 19  ಬಾಧಿಸಿಲ್ಲ. ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ ವ್ಯಾಕ್ಸಿನ್ ಗಾಗಿ 8-10 ಕಿಮೀ ನಡೆಯುವುದು ಹಿರಿಯರಿಗೆ, ಅಸೌಖ್ಯದಿಂದ ಬಳಲುವವರಿಗೆ , ಗರ್ಭಿಣಿ ಮಹಿಳೆಯರಿಗೆ ಅಸಾಧ್ಯವಾಗಿದೆ. ಆದ್ದರಿಂದ ಅವರವರ ಪ್ರದೇಶದಲ್ಲಿ ವ್ಯಾಕ್ಸಿನ್ ನೀಡಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment