Posts

ಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ಗ್ರಾ.ಪಂ ಸಿಬ್ಬಂದಿಗಳಿಗೆ ಕಿಟ್ ಹಾಗೂ ವೈದ್ಯಕೀಯ ಪರಿಕರ ವಿತರಣೆ.


ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ಇಂದು ಮಂಗಳವಾರ ಉಜಿರೆ ಗ್ರಾಮ ಪಂಚಾಯತಿನ 21 ಸಿಬ್ಬಂದಿಗಳಿಗೆ  ಮಾಸ್ಕ್ , ಸಾನಿಟೈಸರ್ , ಕ್ಯಾಪ್, ಫೇಸ್ ಶಿಲ್ಡ್ ಹಾಗೂ ಆಹಾರ ಕಿಟ್ ಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೂಲಕ ವಿತರಿಸಲಾಯಿತು.



ಕಾರ್ಯಕ್ರಮದಲ್ಲಿ  ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ , ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ.ಆರ್.ಶೆಟ್ಟಿ ,‌ಉಪಾಧ್ಯಕ್ಷ ರವಿ ಬರಮೇಲು , ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಮ್.ಶಶಿಧರ್ ಕಲ್ಮಂಜ, ಶ್ರೀಧರ್ ಕಲ್ಮಂಜ ಮತ್ತು ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official