Posts

ಬದುಕು ಕಟ್ಟೋಣ ಬನ್ನಿ ತಂಡ ಮತ್ತು ರೋಟರಿ ಕ್ಲಬ್ ಸಹಯೋಗದಿಂದ ಉಜಿರೆ ವರ್ತಕರು ಮತ್ತು ಆಟೋ ಚಾಲಕರಿಗೆ ವ್ಯಾಕ್ಸಿನ್ ಅಭಿಯಾನ.

1 min read


ಬೆಳ್ತಂಗಡಿ : ಸದಾ ಸಮಾಜಮುಖಿಯಾಗಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ಇದೀಗ ವರ್ತಕರು ಹಾಗೂ ರಿಕ್ಷಾ ಚಾಲಕರ ಆರೋಗ್ಯದ ಕಾಳಜಿಗಾಗಿ ಮಿಡಿದಿದ್ದು,  ಸಂಘಟನೆಯ ರೂವಾರಿಗಳಾದ ಉಜಿರೆಯ ಉದ್ಯಮಿ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ರ್ಸ್ ಮಾಲಕ ರಾಜೇಶ್ ಪೈ ಅವರ ನೇತೃತ್ವದಲ್ಲಿ  ಜೂ.29ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಮಂಟಪದಲ್ಲಿ 527 ಜನ ವರ್ತಕರು ಹಾಗೂ ರಿಕ್ಷಾ ಚಾಲಕರಿಗೆ ವ್ಯಾಕ್ಸಿನ್ ನೀಡುವ ಮಹಾ ಅಭಿಯಾನ ಯಶಸ್ವಿಯಾಗಿ ನಡೆಯಿತು.


ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಜನರ, ವರ್ತಕರ ಬೇಡಿಕೆಯನ್ನು ಮೋಹನ್‌ ಕುಮಾರ್ ಮತ್ತು ರಾಜೇಶ್ ಪೈ ಅವರು ಶಾಸಕ ಹರೀಶ್ ಪೂಂಜರಲ್ಲಿ‌ ವಿನಂತಿಸಿಕೊಂಡಂತೆ ಶಾಸಕರು ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು.

ಈ ಸಮಾರಂಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ.ಆರ್.ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ತಾಲೂಕು ಆರೋಗ್ಯಾಧಿಕಾರಿ ಡಾ.ಕಾಲಮಧು,ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ರೋಟರಿ ಕ್ಲಬ್  ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ, ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ರೋಟರಿ ಕ್ಲಬ್ ಕಾರ್ಯದರ್ಶಿ ಅಬೂಬಕ್ಕರ್, ಉಜಿರೆ ವೈದ್ಯಾಧಿಕಾರಿ ಅಕ್ಷತಾರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ವ್ಯಾಕ್ಸಿನ್ ನೀಡುತ್ತಿದ್ದ ಕಾರ್ಯಕ್ರಮದ ವೇಳೆ ಮಂಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಭೇಟಿ ನೀಡಿ,‌ಕಾರ್ಯಕ್ರಮದ ಅಚ್ಚುಕಟ್ಟಾದ ಸಂಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment