ಬೆಳ್ತಂಗಡಿ: ರಾಜ್ಯದಲ್ಲಿ ಕೋವಿಡ್ ಪ್ರಮಾಣ ತಗ್ಗಿದ ಹಿನ್ನಲೆಯಲ್ಲಿ ಲಾಕ್ಡೌನ್ ಸಡಿಲಿಸಿದ ಪರಿಣಾಮ ಬೆಂಗಳೂರಿನಲ್ಲಿರುವ ಉದ್ಯೋಗಿಗಳು ತಮ್ಮ ತಮ್ಮ ಸಂಸ್ಥೆಗಳಿಗೆ ತೆರಳಬೇಕಾಗಿರುವುದರಿಂದ ಬೆಳ್ತಂಗಡಿ ತಾಲೂಕಿನಿಂದ ಸೋಮವಾರ ಬೆಳಿಗ್ಗೆ 10 ಗಂಟೆಗೆ ಶ್ರಮಿಕ ಸ್ಪಂದನ ಬಸ್ಸು ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಶಾಸಕ ಹರೀಶ್ ಪೂಂಜ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಶ್ರಮಿಕ ಸಂಪರ್ಕದ ಈ ಸೌಲಭ್ಯವನ್ನು ಪಡೆಯಲು ಪ್ರಯಾಣ ಬಯಸುವವರು ಅವರವರ ಕೆಲಸ ಮಾಡುವ ಸಂಸ್ಥೆಯಿಂದ ನೀಡಿರುವ ಡ್ಯೂಟಿ ಜಾಯಿನಿಂಗ್ ಲೆಟರ್, ಆಧಾರ್ ಕಾರ್ಡ್, ಅಭ್ಯರ್ಥಿಯ ಹೆಸರು ಮತ್ತು ವಿಳಾಸವನ್ನು ಶಾಸಕರ ಆಪ್ತ ಸಹಾಯಕರ ವಾಟ್ಸ್ ಆಪ್ ಸಂಖ್ಯೆಗೆ ಕಳುಹಿಸಿ ನೋಂದಾಯಿಸಿಕೊಳ್ಳಬಹುದೆಂದು ತಿಳಿಸಲಾಗಿದೆ.
ಸಂದೇಶ್ ಬಿ - +919663471620
ವಿನೋದ್ -+919901763573.