ಬೆಳ್ತಂಗಡಿ; ಕೊಕ್ಕಡದಲ್ಲಿ 4.80 ಕೋಟಿ ವೆಚ್ಚದಲ್ಲಿ ಮೇಲ್ಜರ್ಜೆಗೇರಿದ ಸಮುದಾಯ ಆಸ್ಪತ್ರೆಯ ಕಟ್ಟಡ ಮತ್ತು ಚಾರ್ಮಾಡಿ ಯಲ್ಲಿ 1.30 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಬುಧವಾರ ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಎ.ಸಿ ಡಾ. ಯತೀಶ್ ಉಳ್ಳಾಲ್, ಡಿಹೆಚ್ಒ ಡಾ. ಕಿಶೋರ್ ಎಂ, ಜಿ.ಪಂ ಸಿಇಒ ಡಾ. ಕುಮಾರ್, ತಾ. ಆರೋಗ್ಯಾಧಿಕಾರಿ ಡಾ.ಕಲಾಮಧು,
ಎಂ.ಬಿ ಶ್ರೀನಾಥ್ ಕಾರ್ಯನಿರ್ವಾಹಕ ಇಂಜಿನಿಯರ್, ತಹಶಿಲ್ದಾರ್ ಮಹೇಶ್ ಜೆ, ಇಒ ಕುಸುಮಾಧರ ಬಿ, ಕೊಕ್ಕಯಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ಸಿಡಿಪಿಒ ಪ್ರಿಯಾ ಆಗ್ನೇಸ್ ಚಾಕೋ, ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷ ಕೆ.ವಿ ಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ತಾಲೂಕು ಅಧ್ಯಕ್ಷ ಜಯಂತ ಕೋಟ್ಯಾನ್, ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಮೋರ್ತಾಜೆ, ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯ್ಕ,ಇಪಿ ಶೆಟ್ಟಿ. ಆರೋಗ್ಯಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್,ಡಾ.ಪ್ರಕಾಶ್, ಡಾ. ಪೂಜಾ, ಡಾ. ಮನೋಜ್ ಎಸ್.ಎಸ್ ಮೊದಲಾದವರು ಉಪಸ್ಥಿತರಿದ್ದರು.