Posts

ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯ ಆರ್ಥಿಕ ಸಹಾಯ

0 min read


ಬೆಳ್ತಂಗಡಿ; ಇಳಂತಿಲ ಗ್ರಾಮದ ಕೊಡಂಗೆ ನಿವಾಸಿ ನೀಲಯ್ಯ ಗೌಡ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಾ ತೀರ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ 'ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ' ದ ಸೇವಾ ಯೋಜನೆಯ ಧನ ಸಹಾಯ 20 ಸಾವಿರ ರೂ.ಗಳ ಚೆಕ್ಕನ್ನು ಹಸ್ತಾಂತರಿಸಲಾಯಿತು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕ ಯುವರಾಜ ಗೌಡ ಅನಾರು ಫಲಾನುಭವಿಗೆ ಚೆಕ್ ನೀಡಿದರು.

ಈ ಸಂದರ್ಭ ವಾಣಿ ಸೌಹಾರ್ದ ಕೋ-ಆಪರೇಟಿವ್(ಲಿ.) ನಿರ್ದೇಶಕ ಸುರೇಶ್ ಗೌಡ ಕೌಡಂಗೆ, ಸ್ಥಳೀಯರಾದ ಕಾರ್ತಿಕ್ ಗೌಡ ಅನ್ನಾಜೆ, ಲೋಕೇಶ್ ಗೌಡ ಕಂಗಿನಾರುಬೆಟ್ಟು, ಸುಬ್ರಹ್ಮಣ್ಯ ಗೌಡ ಹಾಗೂ ಸ್ಪಂದನಾ ಸೇವಾ ಸಂಘದ ಸದಸ್ಯರುಗಳಾದ ಸೀತಾರಾಮ್ ಬೆಳಾಲು ಹಾಗೂ ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment