ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡಜಾಲುವಿನ ಉಳ್ಲಾಲ್ತಿ ದೇವಾಲಯದ ಆವರಣದಲ್ಲಿ
ಹಣ್ಣು ಹಂಪಲು, ಹೂವು ಹಾಗೂ ನೆರಳು ಕೊಡುವ ಗಿಡಗಳನ್ನು ಶನಿವಾತ ನಾಟಿ ಮಾಡಲಾಯಿತು.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ಸೇವಾ ಘಟಕ ನಿಡ್ಲೆ ಇವರು ಶ್ರಮದಾನ ನಡೆಸಿದರು.
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಕೆ.ಆರ್.ಅಶೋಕ ಗಿಡ ನಾಟಿ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಜನಜಾಗೃತಿ ಆಡಳಿತ ಯೋಜನಾಧಿಕಾರಿ ಮೋಹನ್ ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕ ಪ್ರಶಾಂತ್ ಸ್ವಯಂಸೇವಕರೊಂದಿಗೆ ಶ್ರಮದಾನದಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ನಿಡ್ಲೆ ಘಟಕಕ್ಕೆ ಹೊಸದಾಗಿ ಸೇರ್ಪಡೆಯಾದ ಸ್ವಯಂಸೇವಕರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ನೂರಕ್ಕೂ ಅಧಿಕ ಗಿಡಗಳನ್ನು ನಾಟಿ ಮಾಡಲಾಗಿದೆ.