ಬೆಳ್ತಂಗಡಿ; ಕಪುಚಿನ್ ಕೃಷಿಕ್ ಸೇವಾ ಕೇಂದ್ರ(ರಿ) ವಿಮುಕ್ತಿ ಲಾಯಿಲ ವತಿಯಿಂದ ಹೊಸದಾಗಿ ನಿರ್ಮಿಸಲ್ಪಟ್ಟ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕೋನ್ಸಂಟ್ರೇಟರ್ ಹಸ್ತಾಂತರಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು ಅವರು ವಿಮುಕ್ತಿ ಸಂಸ್ಧೆಯ ನಿರ್ದೇಶಕ ಫಾ. ವಿನೋದ್ ಮಸ್ಕರೇನ್ಹಸ್ ಅವರಿಂದ ಕೊಡುಗೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕದ ವೈದ್ಯಾಧಿಕಾರಿ ಡಾ.ಪ್ರಕಾಶ್, ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ದಿತರಿದ್ದರು. ವಿಮುಕ್ತಿ ಸಂಸ್ದೆಯ ಶಿಕ್ಷಣ ಸಂಯೋಜಕಿ ಎಮಿಲ್ಡಾರವರು ಹಾಜರಿದ್ದರು.