Posts

ದೇವರಾಜ ಅರಸು ಅಭಿವೃದ್ಧಿ ನಿಗಮ ಮೂಲ್ಕಿ ತಾಲೂಕು ಪ್ರಥಮದರ್ಜೆ ಸಹಾಯಕರಾಗಿ ಜಯಶ್ರೀ ಪಿಲಿಕಲ ನೇಮಕ ಸರಕಾರಿ ಯದ್ಯೋಗ ಗಿಟ್ಟಿಸಿಕೊಂಡ ಮಲೆಕುಡಿಯ ಸಮಾಜದ ಯುವತಿ

1 min read


ಬೆಳ್ತಂಗಡಿ; ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಪಿಲಿಕಲ ಎಂಬಲ್ಲಿನ ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ರವರು ದೇವರಾಜು ಅರಸು ಅಭಿವೃದ್ಧಿ ನಿಗಮ ಮೂಲ್ಕಿ ತಾಲೂಕು ಇಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನಿಯುಕ್ತರಾಗಿದ್ದಾರೆ. 

ಇವರು ನೆರಿಯ ಆಲಂಗಾಯಿ ಆಶ್ರಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ಇಲ್ಲಿ ಪ್ರೌಢ ಶಿಕ್ಷಣವನ್ನು , ಗುರುದೇವ ಕಾಲೇಜು ಬೆಳ್ತಂಗಡಿಯಲ್ಲಿ ಪಿ.ಯು ಶಿಕ್ಷಣವನ್ನು ಪಡೆದಿದ್ದಾರೆ. ಮುಂದುವರಿಸಿ ಪದವಿ ಶಿಕ್ಷಣವನ್ನು ಎಸ್.ಡಿ.ಎಂ ಕಾಲೇಜು ಉಜಿರೆಯಲ್ಲಿ, ಸ್ನಾತಕೋತ್ತರ ಪದವಿಯನ್ನು (MHRD) ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರುತ್ತಾರೆ.

ಸವಣಾಲು ಗ್ರಾಮದ ಪಿಲಿಕಲ ನಿವಾಸಿ ಮಹಾಬಲ ಮಲೆಕುಡಿಯ ಎಂಬವರ ಪುತ್ರಿಯಾಗಿರುವ ಜಯಶ್ರೀ ಅವರು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯ , ದ.ಕ ಜಿಲ್ಲಾ ಸಹಸಂಚಾಲಕ , ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲರವರ ಸಹೋದರಿಯಾಗಿದ್ದಾರೆ. ಮಲೆಕುಡಿಯ ಸಮಾಜದವರಾದ ಜಯಶ್ರೀ ಅವರು ಉನ್ನತ ಶಿಕ್ಷಣ ಪಡೆದು ಇದೀಗ ಸರಕಾರಿ ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ 

ಸಮಾಜಕ್ಕೆ ಹೆಮ್ಮೆ ತಂದಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment