ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿ ನೇಮಕಗೊಂಡ ಶಿವಕುಮಾರ್ ಅವರು ಶುಕ್ರವಾರ 4:30 ಕ್ಕೆ ತಮ್ಮ ಬೆಳ್ತಂಗಡಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಉತ್ತರಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರನ್ನು ಇತ್ತೀಚೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸರಕಾರ ನಿಯೋಜಿಸಿತ್ತು.
ಆಧಿಕಾರ ದಂಡ ಸ್ವೀಕರಿಸಿದ ಬಳಿಕ ಅವರನ್ನು ತಮ್ಮ ವ್ಯಾಪ್ತಿಗೆ ಬರುವ ಪುಂಜಾಲಕಟ್ಟೆ, ಬೆಳ್ತಂಗಡಿ , ಧರ್ಮಸ್ಥಳ , ವೇಣೂರು, ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.
ಬಳಿಕ ನೂತನ ಸರ್ಕಲ್ ಇನ್ಸ್ಪೆಕ್ಟರ್ ಅವರು ತಮ್ಮ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದರು.