Posts

ಕೊಯ್ಯೂರಿನ‌ ಕಿನ್ಯಾಜೆ ವಿಶ್ವನಾಥ ಗೌಡರಿಗೆ ಸ್ಪಂದನ ಸೇವಾ ಸಂಘದ ನೆರವು

1 min read

 


ಬೆಳ್ತಂಗಡಿ; ಸ್ಪಂದನಾ ಸೇವಾ ಸಂಘದ 40ನೇ ಸೇವಾ ಯೋಜನೆಯ ಧನಸಹಾಯವನ್ನು, ಆರ್ಥಿಕ ಸಂಕಷ್ಟದಲ್ಲಿದ್ದು ಆಕಸ್ಮಿಕವಾಗಿ ಬಿದ್ದು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕೊಯ್ಯೂರು ಗ್ರಾಮದ ಕಿನ್ಯಾಜೆ ನಿವಾಸಿ  ವಿಶ್ವನಾಥ ಗೌಡ ಇವರಿಗೆ  20 ಸಾವಿರ ರೂ.ಗಳ  ಚೆಕ್ಕನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕ ರವೀಂದ್ರನಾಥ್ ಗೌಡ ಪೆರ್ಮುದೆ ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು, ಮಾಜಿ ನಿರ್ದೇಶಕ ವಿಜಯ್ ಕುಮಾರ್ ಕೊಯ್ಯೂರು,  ವಾಣಿ ಸೌಹಾರ್ದ ಕೋ-ಆಪರೇಟೀವ್ ಸೊಸೈಟಿ (ಲಿ.) ನಿರ್ದೇಶಕರುಗಳಾದ  ಉಷಾದೇವಿ ಕಿನ್ಯಾಜೆ, ಸುರೇಶ್ ಕೌಡಂಗೆ, ತಾಲೂಕು ಮಹಿಳಾ ವೇದಿಕೆಯ ಕಾರ್ಯದರ್ಶಿ  ಗೀತಾ ರಾಮಣ್ಣ ಗೌಡ, ಕೊಯ್ಯೂರು ಗ್ರಾಮ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ಮೈಂದಕೋಡಿ, ಉಪನ್ಯಾಸಕ ಡಾ. ದಿವಾ ಕೊಕ್ಕಡ, ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಯಶವಂತ ಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ  ಮೀನಾಕ್ಷಿ ಮಹಾಬಲ ಗೌಡ ಮತ್ತು ಸ್ಥಳೀಯ ಗ್ರಾಮದ ಸ್ವಜಾತಿ ಬಾಂಧವರು ಹಾಗೂ ಸ್ಪಂದನಾ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment