Posts

ಧರ್ಮಸ್ಥಳ‌ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅಧಿಕಾರ ಸ್ವೀಕಾರ


ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪವನ್ ನಾಯ್ಕ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನವಾಗಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿಯೋಜಿತರಾದ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅವರು ಜು.16 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

 


ವೇಣೂರು ಠಾಣೆಯಲ್ಲಿ ಪ್ರೊಬೆಷನರಿ ಅವಧಿ ಮುಗಿಸಿದ ಕೃಷ್ಣಕಾಂತ್ ಅವರನದನ್ನು ನಿನ್ನೆಯಷ್ಟೇ ಧರ್ಮಸ್ಥಳ ಠಾಣೆಗೆ ನೇಮಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ. (ಐಪಿಎಸ್) ಆದೇಶ ಹೊರಡಿಸಿದ್ದರು.

ಧರ್ಮಸ್ಥಳ ಠಾಣೆಯ ಇನ್ನೋರ್ವ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಅವರು ನೂತನ ಎಸ್.ಐ ಅವರನ್ನು ಹೂಗುಚ್ಚ ನೀಡಿ ಬರಮಾಡಿಕೊಂಡರು.

ಈ‌ ಸಂದರ್ಭ ಎಎಸ್‌ಐ ಬಾಲಕೃಷ್ಣ,  ಠಾಣಾ ಬರಹಗಾರ ವಿಶ್ವನಾಥ ನಾಯ್ಕ, ಹೆಡ್ ಕಾನ್ಸ್‌ಟೇಬಲ್ ಗಳಾದ ರವೀಂದ್ರ, ಅಸ್ಲಂ, ರಾಹುಲ್ ಮತ್ತು ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official