Posts

ಕೊರೋನಾ- ಬೆಂಗಳೂರನ್ನು ಹಿಂದಿಕ್ಕಿದ ದಕ್ಷಿಣ ಕನ್ನಡದ | ಮೈ ಮರೆತರೆ ಮತ್ತೊಮ್ಮೆ ಲಾಕ್‌ಡೌನ್ ಖಚಿತ

1 min read


ಬೆಳ್ತಂಗಡಿ: ರಾಜ್ಯದಲ್ಲಿ ಇಂದು 1875 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.20 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 29,06,999 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,46,244 ಜನ ಗುಣಮುಖರಾಗಿದ್ದು, 36,587 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಪೈಕಿ ಬೆಚ್ಚಿಬೀಳಿಸುವ ಸುದ್ದಿ ಎಂದರೆ ರಾಜಧಾನಿ ಬೆಂಗಳೂರಿಗಿಂತ ನಮ್ಮ ದ.ಕ ಜಿಲ್ಲೆ ಸೋಂಕಿತರ ಲೀಸ್ಟ್ ನಲ್ಲಿ ಮುಂದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 409 ಜನರಿಗೆ ಸೋಂಕು ತಗುಲಿದರೆ ದ.ಕ ದಲ್ಲಿ 410 ಜನರಿಗೆ ಕೋವಿಡ್ ದೃಢಪಟ್ಟಿದೆ.

ಬೆಂಗಳೂರಿನಲ್ಲಿ  377 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 8553 ಸಕ್ರಿಯ ಪ್ರಕರಣಗಳಿದ್ದು, 8 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ವಿವರ ನೋಡುವುದಾದರೆ

ಬಾಗಲಕೋಟೆ 0, ಬಳ್ಳಾರಿ 13, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 37, ಬೆಂಗಳೂರು ನಗರ 409, ಬೀದರ್ 1, ಚಾಮರಾಜನಗರ 33, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 65, ಚಿತ್ರದುರ್ಗ 32, ದಕ್ಷಿಣಕನ್ನಡ 410, ದಾವಣಗೆರೆ 17, ಧಾರವಾಡ 23, ಗದಗ 12, ಹಾಸನ 108, ಹಾವೇರಿ 2, ಕಲಬುರ್ಗಿ 9, ಕೊಡಗು 83, ಕೋಲಾರ 35, ಕೊಪ್ಪಳ 1, ಮಂಡ್ಯ 42, ಮೈಸೂರು 146, ರಾಯಚೂರು 1, ರಾಮನಗರ 7, ಶಿವಮೊಗ್ಗ 65, ತುಮಕೂರು 52, ಉಡುಪಿ 162, ಉತ್ತರಕನ್ನಡ 46, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ

ವರದಿಯಾಗಿದೆ.

ಕೇರಳ- ಕರ್ನಾಟಕ ಬಸ್ಸು ಸಂಚಾರ ಬಂದ್

ಕೇರಳ ರಾಜ್ಯದಲ್ಲಿ ಕೋವಿಡ್ ಅನಿಯಮಿತವಾಗಿ ಏರುತ್ತಿದ್ದು ಆ ಹಿನ್ನೆಲೆಯಲ್ಲಿ ಕರ್ನಾಟಕ- ಕೇರಳ ಸರಕಾರಿ ಬಸ್ಸು ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ.ಕೇರಳ ಗಡಿ ಭಾಗವಾದ ತಲಪಾಡಿಯಲ್ಲಿ ಕೋವಿಡ್ ಪರೀಕ್ಷಣಾ ಕೇಂದ್ರಗಳನ್ನು ತೆರೆಯಲಾಗಿದೆ. ನೆಗೆಟಿವ್ ರಿಪೋರ್ಟ್ ಇರುವವರನ್ನು ಮಾತ್ರ ಕರ್ನಾಟಕಕ್ಕೆ ಬಿಡಲಾಗುತ್ತಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment