ಬೆಳ್ತಂಗಡಿ; ಬ್ಲಾಕ್ ಕಾಂಗ್ರೆಸ್ (ನಗರ ಮತ್ತು ಗ್ರಾಮೀಣ) ಹಾಗೂ ಬ್ಲಾಕಿನ ಎಲ್ಲ ವಿವಿಧ ಘಟಕಗಳ ವತಿಯಿಂದ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯರಾಗಿದ್ದ ದಿ.ಆಸ್ಕರ್ ಫೆರ್ನಾಂಡೀಸ್ ಅವರಿಗೆ ಶ್ರದ್ಧಾಂಜಲಿ ಸಭೆಯು ಸೋಮವಾರ ನಗರದ ಶ್ರೀ ಗುರುನಾರಾಯಣ ಸಂಕೀರ್ಣದ ಆಶಾಸಾಲಿಯಾನ್ ಸಭಾಭವನದಲ್ಲಿ ನಡೆಯಿತು.
ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ.ಗೌಡ, ಶೈಲೇಶ್ ಕುಮಾರ್, ಹಿರಿಯ ಮುಖಂಡ ರಾಜಶೇಖರ ಅಜ್ರಿ ಇವರು ಆಸ್ಕರ್ ಫರ್ನಾಂಡೀಸ್ ಅವರ ಬಗ್ಗೆ ಮಾತನಾಡಿ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷ ಅಶ್ರಫ್ ಬಿ ನೆರಿಯ, ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ, ಜಿಲ್ಲಾ ಕಾಂಗ್ರೆಸ್ ಮುಖಂಡ ಎ.ಸಿ ಮ್ಯಾಥ್ಯು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ದಯಾನಂದ ಬೆಳಾಲು, ಹಿಂದುಳಿದ ವರ್ಗಗಳ ಉಭಯ ಬ್ಲಾಕ್ ಅಧ್ಯಕ್ಷರಾದ ದಯಾನಂದ ದೇವಾಡಿಗ ಮತ್ತು ಶುಬಿತ್, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಶಾಂತಾ ಅಂಡಿಂಜೆ, ಎಸ್.ಸಿ ಘಟಕದ ಅಧ್ಯಕ್ಷ ರವಿ ನೇತ್ರಾವತಿನಗರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷ ಸಲೀಂ ಗುರುವಾಯನಕೆರೆ ಸ್ವಾಗತಿಸಿದರು.