ಬೆಳ್ತಂಗಡಿ; ದೇಶದಾಧ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು ಅದನ್ನು ತಡೆಯುವಲ್ಲಿ ಹಾಗೂ ಅತ್ಯಾಚಾರಿಗಳನ್ನು ನಿಯಂತ್ರಿಸುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಆರೋಪಿಸಿದರು.
ಇತ್ತೀಚೆಗೆ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಮಹಿಳಾ ಡಿಫೆನ್ಸ್ ಅಧಿಕಾರಿ ಸಾಬಿಯಾ ಸೈಫ್ ಪ್ರಕರಣ ಖಂಡಿಸಿ ಹಾಗೂ ದೇಶದಾಧ್ಯಂತ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಬೆಳ್ತಂಗಡಿಯ ಮಿನಿವಿಧಾನ ಸೌಧದ ಎದುರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಹಿಂದೂಗಳ ರಕ್ಷಣೆ ಮಾಡುತ್ತೇವೆ, ಮಹಿಳೆಯರ ರಕ್ಷಣೆ ಮಾಡುತ್ತೇವೆಂದು ಹೇಳುತ್ತಿದ್ದ ಬಿಜೆಪಿ ಆಡಳಿತದಲ್ಲಿ ಬೀದಿ ಬೀದಿಗಳಲ್ಲಿ ಅತ್ಯಾಚಾರ ನಡೆಯುತ್ತಿದೆ. ದೇವಸ್ಥಾನಗಳೇ ರಕ್ಷಣೆ ಇಲ್ಲದೆ ನೆಲಕ್ಕುರುಳುತ್ತಿದ್ದು, ದೇವರ ಮೂರ್ತಗಳು ಭಗ್ನಗೊಳ್ಳುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾಜಿ ಸಚಿವ ಕೆ ಗಂಗಾಧರ ಗೌಡ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಮಹಿಳಾ ಕಾಂಗ್ರೆಸ್ ಮುಖಂಡೆ ಜೆಸ್ಸಿಂತಾ ಮೋನಿಸ್ ಮಾತನಾಡಿದರು.
ಪ್ರತಿಭಟನೆಯ ನೇತೃತ್ವವನ್ನು ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರುಗಳಾದ ರಂಜನ್ ಜಿ.ಗೌಡ, ಶೈಲೇಶ್ ಕುಮಾರ್ , ಹಿರಿಯ ಮುಖಂಡ ರಾಜಶೇಖರ ಅಜ್ರಿ, ಎಪಿಎಂಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷ ಅಶ್ರಫ್ ಬಿ ನೆರಿಯ, ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ, ಕಾಂಗ್ರೆಸ್ ಮುಖಂಡರುಗಳಾದ ಈಶ್ವರ ಭಟ್, ಉಷಾ ಶರತ್, ಎ.ಸಿ ಮ್ಯಾಥ್ಯು, ದಯಾನಂದ ಬೆಳಾಲು, ಜಗದೀಶ್ ಡಿ, ಮನೋಹರ ಕುಮಾರ್, ದಯಾನಂದ ದೇವಾಡಿಗ ಮತ್ತು ಶುಬಿತ್, ವಂದನಾ ಅಂಡಿಂಜೆ, ರವಿ ನೇತ್ರಾವತಿನಗರ,ಬಿ.ಕೆ ವಸಂತ, ನಾಗರಾಜ ಲಾಯಿಲ, ನಾಮದೇವ ರಾವ್ ಮುಂಡಾಜೆ, ನಾರಾಯಣ ಗೌಡ ದೇವಸ್ಯ, ಇಸುಬು ಇಳಂತಿಲ, ಮಮ್ಮಿಕುಂಞಿ ಕಕ್ಕಿಂಜೆ, ನೇಮಿರಾಜ್ ಗವಬಡ, ನೇಮಿರಾಜ್ ಕಿಲ್ಲೂರು, ಖಾಲಿದ್ ಕಕ್ಯೇನ ಹಾಗೂ ಇತರರು ಹೋರಾಟ ನೇತೃತ್ವ ವಹಿಸಿದ್ದರು. ಪ್ರತಿಭಟನಾಕಾರರು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷ ಸಲೀಂ ಗುರುವಾಯನಕೆರೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು