ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕವಾಗಿ ತಾವರೆ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದಾ ದಂಪತಿ ಪುತ್ರಿ, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18)ಮೃತಪಟ್ಟ ದುರ್ದೈವಿ.
ಈಕೆ ಬೆಳಗ್ಗೆ ತನ್ನ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶ್ರೇಯಾ ಹಿಂತಿರುಗಿ ಬಾರದೆ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಕಡೆ ಹೋಗಿದ್ದ ವೇಳೆ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಗೊತ್ತಾಗಿದೆ.