Posts

ಡಿಸಿ ಗೆ ಬೆದರಿಕೆ ಹಾಕಿದ ಜಗದೀಶ್ ಕಾರಂತ ವಿರುದ್ಧ ಎಫ್‌ಐ‌ಆರ್ ಕಾರಿಂಜ ಪ್ರತಿಭಟನೆಯಲ್ಲಿ ಕ್ವಾರಿ ನಿಲ್ಲಿಸಲು ಡೆಡ್‌ಲೈನ್ ಪ್ರಕರಣ

1 min read


ಬೆಳ್ತಂಗಡಿ; ಕಾರಿಂಜ ರಥಬೀದಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಮಾವೇಶದಲ್ಲಿ ದ.ಕ ಜಿಲ್ಲಾಧಿಕಾರಿ ಡಾ.‌ಕೆ.ವಿ ರಾಜೇಂದ್ರ ಅವರಿಗೆ ಡೆಡ್‌ಲೈನ್ ನೀಡಿ ಸಾರ್ವಜನಿಕವಾಗಿ ಬೆದರಿಕೆ ಹಾಕಿದ ಹಿಂದೂ ಜಾಗರಣಾ ವೇದಿಕೆಯ  ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಅವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ವತಃ ಜಿಲ್ಲಾಧಿಕಾರಿ ಅವರೇ ದೂರುದಾರರಾಗಿದ್ದು ಆ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ನಿರ್ದೇಶನ ಪಡೆದ ಪೊಲೀಸ್ ಅಧಿಕಾರಿಗಳು ಪ್ರಚೋದನಾತ್ಮಕವಾಗಿ ಮತ್ತು ಬೆದರಿಕಾ ಶೈಲಿಯಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಅವರ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ.

ನ. 21 ರಂದು ಸಂಜೆ  ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಕಾರಿಂಜ ರಥಬೀದಿಯಲ್ಲಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ 'ರುದ್ರಗಿರಿಯ ರಣಕಹಳೆ' ಎಂಬ ಬೃಹತ್ ಜನಜಾಗೃತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ| ರಾಜೇಂದ್ರ ಕೆ ವಿ ಅವರನ್ನುದ್ದೇಶಿಸಿ, ಬಂಟ್ವಾಳ ತಾಲೂಕಿನ ಕಾರೀಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ..ಇಲ್ಲವಾದರೇ ಟ್ರಾನ್ಸ್‌ ಫರ್ ತೆಗೆದುಕೊಂಡು ಹೋಗೋ..ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು  ಅಸಭ್ಯವಾಗಿ ಮಾತುಗಳನ್ನಾಡಿದ್ದರು ಎಂಬುದು ಡಿಸಿ ಅವರು ನೀಡಿದ ದೂರಿನ ಉಲ್ಲೇಖ. ಈ ರೀತಿ ಕೀಳಾಗಿ ವರ್ತಿಸುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಜಗದೀಶ್ ಕಾರಂತ ಅವರು ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ ದುಷ್ಪ್ರೇರಣೆ ನೀಡಿರುತ್ತಾರೆ. 

ಜಗದೀಶ್ ಕಾರಂತ್‌ ಅವರು ಅಪರಾಧಿಕ ಕೃತ್ಯವನ್ನು ಎಸಗುವ ಮನೋದೋರಣೆ  ಹೊಂದಿ ಪ್ರಚೋದಾನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು  ಪ್ರಚೋದಿಸಿ  ಬೆದರಿಕೆ ಹಾಕಿರುವ ಬಗ್ಗೆ ಎಂದು ಎಫ್‌ಐಆರ್ ನಲ್ಲಿ ಕೇಸು ದಾಖಲಾಗಿದೆ‌. ಜಗದೀಶ ಕಾರಂತ ಅವರ ವಿರುದ್ಧ ಠಾಣಾ ಅ.ಕ್ರ 84/2021  ಕಲಂ: 153,117, 504, 506, 189 ಐಪಿಸಿ ಯಂತೆ ದೂರು ದಾಖಲಾಗಿರುತ್ತದೆ.  ಸದ್ರಿ ವಿಚಾರ ಇದೀಗ ಭಾರೀ ಚರ್ಚೆಗೆ ಆಸ್ಪದ ನೀಡಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment