Posts

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮೃತ್ಯುಂಜಯ ಹೋಮ

1 min read

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ರಂದು ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮಹಾಮೃತ್ಯುಂಜಯ ಹೋಮ ಪೂರ್ವಾಹ್ನದಿಂದ ಸರ್ವ ವಿಧಿ ವಿಧಾನಗಳೊಂದಿಗೆ ಆರಂಭವಾಗಿದೆ.




ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ, ಶ್ರಿಂಗೇರಿ ಕ್ಷೇತ್ರ ಸೇರಿದಂತೆ 108 ಮಂದಿ ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮದ ವಿಧಿಗಳು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುತ್ತಿದೆ.





ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ ಹೆಗ್ಗಡೆ ಅವರ ಸಮ್ಮುಖದಲ್ಲಿ ಜ.17 ರಂದು ಬೆಳಗ್ಗೆ 7ಗಂಟೆಯಿಂದ ಚತುರ್ವೇದ ಪಾರಾಯಣ ಪ್ರಾರಂಭಿಸಿ, ಗೋಪೂಜೆ, ಮಹಾಗಣಪತಿ ಹೋಮ ಬಳಿಕ ಮಹಾಮೃತ್ಯುಂಜಯ ಹೋಮ ಆರಂಭವಾಗಿದೆ.

ಸಚಿವರಾದ ಕೆ.ಎಸ್ ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ ಇವರು ಉಪಸ್ಥಿತರಿದ್ದಾರೆ. ಶಾಸಕ ಹರೀಶ್ ಪೂಂಜ, ಅವರ ಧರ್ಮಪತ್ನಿ ಸ್ವೀಕೃತಿ ಪೂಂಜ ಅವರೂ ಪೂಜೆಯಲ್ಲಿ‌ ಭಾಗಿಯಾಗಿದ್ದಾರೆ‌.










ಧರ್ಮಸ್ಥಳ ಕ್ಷೇತ್ರದ ಡಿ ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೇಯಸ್ ಕುಮಾರ್, ನಿಶ್ಚಲ್ ಕುಮಾರ್, ಕ್ಯೂನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಗುಜರಾತ್ ಬರೋಡದ ಉದ್ಯಮಿ ಶಶಿಧರ ಶೆಟ್ಟಿ ಗುರುವಾಯನಕೆರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.‌ಹೆಚ್ ಮಂಜುನಾಥ, ಡಾ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ರಾಧಾಕೃಷ್ಣ ಪೈ ಉಜಿರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ,ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಉಜಿರೆಯ ಉದ್ಯಮಿಗಳಾದ ರಾಜೇಶ್ ಪೈ ಮತ್ತು ಮೋಹನ್ ಕುಮಾರ್, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ ಸವಣಾಲು,  ಸಿರಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ, ನ್ಯಾಯವಾದಿ ಬಿ.ಕೆ ಧನಂಜಯ ರಾವ್, ಎಂ ಶಶಿಧರ ಕಲ್ಮಂಜ, ಶ್ರೀಧರ ಎಂ ಕಲ್ಮಂಜ, ಲಕ್ಷ್ಮೀ‌ನಾರಾಯಣ ಧರ್ಮಸ್ಥಳ, ಪುಷ್ಪರಾಜ್ ಜೈನ್ ಮಡಂತ್ಯಾರು, ಸೆಲೆಸ್ಟಿನ್ ಡಿಸೋಜಾ, ಕೊರಗಪ್ಪ ಗೌಡ ಚಾರ್ಮಾಡಿ, ಶ್ರೀನಿವಾಸ ಬೆಳಾಲು, ಶರತ್ ಬೆಳ್ತಂಗಡಿ, ರವಿ ಚಕ್ಕಿತ್ತಾಯ, ಅರವಿಂದ ಲಾಯಿಲ, ಮಹಾವೀರ ಆರಿಗ, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ, ಪ್ರಕಾಶ್ ರಾವ್ ಚಾರ್ಮಾಡಿ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ಉಮೇಶ್, ಯಶವಂತ ಗೌಡ ಬೆಳಾಲು, ಚೆನ್ನಕೇಶವ ನಾಯ್ಕ, ಗೀತಾ ರಾಮಣ್ಣ ಗೌಡ, ಕೇಶವ ಭಟ್ ಅತ್ತಾಜೆ ಮೊದಲಾದ ಗಣ್ಯರು ಉಪಸ್ಥಿತರಿದ್ದಾರೆ.

----

ವರದಿ

ಅಚ್ಚು ಮುಂಡಾಜೆ, ಚೇರ್ಮೆನ್ ಏಂಡ್ ಪ್ರಿನ್ಸಿಪಲ್ ಎಡಿಟರ್ ಲೈವ್ ಮೀಡಿಯಾ ನ್ಯೂಸ್ ಟೀಮ್

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment