Posts

ಹಳೆಪಿಂಚಣಿ, ಸಮಾನ ವೇತನಕ್ಕೆ ಆಗ್ರಹಿಸಿ ಸರಕಾರಿ ನೌಕರರ ಸಂಘದಿಂದ ಮನವಿ

0 min read


ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಗಮನಹರಿಸುವಂತೆ ಬೆಳ್ತಂಗಡಿ ತಾಕೂಕು ಘಟಕದ ವತಿಯಿಂದ ಸೋಮವಾರ ಶಾಸಕ ಹರೀಶ್ ಪೂಂಜ ಅವರ ಮೂಲಕ  ಸರಕಾರಕ್ಕೆ ಬೇಡಿಕೆಯ ಮನವಿ ಸಲ್ಲಿಸಲಾಯಿತು.
ಮುಖ್ಯವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆ ಹಾಗೂ ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಮನವಿಯಲ್ಲಿ ಸರ್ಕಾರಕ್ಕೆ ಮನವರಿಕೆ ಮಾಡಲು ಶಾಸಕರ ಗಮನಸೆಳೆಯಲಾಯಿತು.


ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮಿತಿ ಅಧ್ಯಕ್ಷ ಜಯರಾಜ್ ಜೈನ್, ಗೌರವಾಧ್ಯಕ್ಷ ಜಯಕೀರ್ತಿ ಜೈನ್ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು. ಜೊತೆಗೆ ವಿವಿಧ ಇಲಾಖೆಗಳ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment