Posts

ಶಿಕ್ಷಕ ಯಾಕೂಬ್ ಕೊಯ್ಯೂರು ಇವರಿಗೆ ರೋಟರಿ ಬೆಂಗಳೂರು ಇವರಿಂದ ವೊಕೇಶನಲ್ ಎಕ್ಸಲೆನ್ಸ್ ಅವಾರ್ಡ್'

0 min read

ಬೆಳ್ತಂಗಡಿ; ರಾಷ್ಟ್ರಪ್ರಶಸ್ತಿ ಪುರಷ್ಕೃತ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಯಾಕೂಬ್ ಕೊಯ್ಯೂರು ಇವರನ್ನು ರೋಟರಿ ಇಂಟರ್ ನ್ಯಾಶನಲ್ ಇಂದಿರಾನಗರ್ ಬೆಂಗಳೂರು ಇವರು 2022 ರ  ವೊಕೇಶನಲ್ ಎಕ್ಸಲೆನ್ಸ್ ಅವಾರ್ಡ್ ಗೆ ಆಯ್ಕೆಮಾಡಿರುತ್ತಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ ಈ ಬಾರಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರೊಬ್ಬರು ಆಯ್ಕೆಗೊಂಡಿರುವುದು ವಿಶೇಷವಾಗಿದೆ. ರಾಜ್ಯದಲ್ಲೇ ಸರಕಾರಿ ಶಾಲೆಯಲ್ಲಿ ಮೊತ್ತ ಮೊದಲ ಗಣಿತ ಪ್ರಯೋಗಾಲಯ ನಿರ್ಮಿಸಿ, ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ನೂತನ ಕಾರ್ಯಗಳ ಮೂಲಕ ಜನಮನ್ನಣೆ  ಗಳಿಸಿರುವ ಶ್ರೀ ಯಾಕೂಬ್ ಕೊಯ್ಯೂರು ಇವರಿಗೆ ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತಾರೆ.

ಇದೇ ಜನವರಿ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೋಟರಿ ಸಂಸ್ಥೆಯ ಅಧಿಕೃತ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment