ಬೆಳ್ತಂಗಡಿ; ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನೇತ್ರಾವತಿ ನದಿಯಗೆ ಸ್ನಾನಕ್ಕೆಂದು ಹೋಗಿದ್ದ ಕಬಕದ ಯುವಕನೋರ್ವ ರವಿವಾರ ಸಂಜೆಯಿಂದ ನಾಪತ್ತೆಯಾದ ಘಟನೆ ನಡೆದಿದ್ದು ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ.
ನಾಪತ್ತೆಯಾಗಿದ್ದ ಬಾಲಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್( 20) ಎಂಬವರೆಂದು ತಿಳಿದುಬಂದಿತ್ತು.
ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ ಸಹೋದರನ ಜೊತೆ ನದಿಗೆ ಹೋಗಿದ್ದು ಈ ವೇಳೆ ಆಕಸ್ಮಿಕ ನಡೆದಿದೆ ಎನ್ನಲಾಗಿದೆ. ಸಂಜೆಯೇ ಧರ್ಮಸ್ಥಳ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳೀಯರ ಸಹಕಾರದೊಂದಿಗೆ ಹುಡುಕಾಟ ನಡೆದರೂ ಪತ್ತೆಯಾಗಿರಲಿಲ್ಲ.
ಇಂದು ಕಾರ್ಯಾಚರಣೆ ಮತ್ತೆ ಮುಂದುವರಿಸಿದ ವೇಳೆ ಬಾಲಕನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.