Posts

ಪ್ರವೀಣ್ ಕೊಲೆ; 10 ಮಂದಿ ವಶಕ್ಕೆ; ಗೃಹ ಸಚುವರ ಹೇಳಿಕೆ

1 min read

ಬೆಂಗಳೂರು,:ದ.ಕ. ಜಿಲ್ಲೆಯ ಬೆಳ್ಳಾರೆಯಲ್ಲಿ ಕಳೆದ ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಈಗಾಗಲೇ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಯನ್ನು ಕೇರಳಕ್ಕೂ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವೀಣ್‌ ನೆಟ್ಟಾರು ಹತ್ಯೆ ದುರದೃಷ್ಟಕರ ಎಂದಿರುವ ಗೃಹಸಚಿವರು, ರಾಜ್ಯದಲ್ಲಿ ಪದೇಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ.  ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು  ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ ಎಂದವರು ಹೇಳಿದ್ದಾರೆ.

ಅಮಾಯಕರ ಬಂಧನ: ಎಸ್‌ಡಿಪಿಐ ಆರೋಪ

ಸ್ಥಳೀಯ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯ ನೆಪದಲ್ಲಿ ನಿನ್ನೆ ರಾತ್ರಿ ಹಲವಾರು ಮನೆಗಳಿಗೆ ದಾಳಿ ನಡೆಸಿ ಕೆಲವು ಮಂದಿ ಅಮಾಯಕ ಯುವಕರನ್ನು ಬಂಧಿಸಿದ್ದಾರೆ, ಘಟನೆಗೆ ಸಂಬಂಧ ಪಟ್ಟಂತೆ ಪೊಲೀಸರು ಸೂಕ್ತ ರೀತಿಯ ತನಿಖೆ ನಡೆಸಿ ನೈಜ ಅರೋಪಿಗಳನ್ನ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸಲಿ. ಅದು ಬಿಟ್ಟು ಬಿಜೆಪಿ ನಾಯಕರನ್ನು ತ್ರಪ್ತಿ ಪಡಿಸಲು ಅಮಾಯಕ ಮುಸ್ಲಿಂ ಯುವಕರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಪೊಲೀಸ್ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಇದನ್ನು ಎಸ್‌ಡಿಪಿಐ ಖಂಡಿಸುತ್ತಿದೆ ಎಂದು ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲು ತಿಳಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment