ಆರೋಪದಡಿ ವ್ಯಕ್ತಿಯೊಬ್ಬರಿಗೆ ಗಂಭೀರ ಹಲ್ಲೆ ನಡೆಸುತ್ತಿದ್ದ ವೇಳೆ ಅವರ ರಕ್ಷಣೆಗೆ ಬಂದ ವ್ಯಕ್ತಿ ಇದೀಗ ಪ್ರಾಣ ಬಿಟ್ಟಿದ್ದಾರೆ ಎಂಬುದು ಮಾಹಿತಿ.ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು ಎಫ್ಐಆರ್ ದಾಖಲಿಸುವ ಸಿದ್ಧತೆ ನಡೆಸಿದ್ದಾರೆ.
ಇಂದಬೆಟ್ಟು ನಿವಾಸಿ ಜಾರಪ್ಪ ನಾಯ್ಕ್ ಎಂಬವರೇ ಘಟನೆಯಲ್ಲಿ ಸಾವನ್ನಿದವರೆಂದು ತಿಳಿದುಬಂದಿದೆ. ಸ್ಥಳೀಯ ಯುವಕರ ಗುಂಪು ಸೇರಿ ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪರಾರಿ ನಿವಾಸಿ ನಾರಾಯಣ ನಾಯ್ಕ್(47) ಎಂಬವರಿಗೆ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪು, ಅತ್ಯಾಚಾರ ಆರೋಪದಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನು ಪಕ್ಕದಲ್ಲಿ ನೋಡಿದ ನಾರಾಯಣ ನಾಯ್ಕ್ ಅವರ ಪತ್ನಿಯ ಅಕ್ಕನ ಪತಿ ಜಾರಪ್ಪ ನಾಯ್ಕ್ (55) ತಡೆಯುವ ಪ್ರಯತ್ನ ನಡೆಸಿದ್ದರು. ಈ ವೇಳೆ ಯುವಕರ ತಂಡ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರೂ ಗಾಯಗೊಂಡು ಬಿದ್ದಿರುವುದರ ಮಾಹಿತಿ ಅರಿತು ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ಧಾವಿಸಿಬಂದು ವಾಹನದಲ್ಲಿ ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದಾರಿ ಮಧ್ಯೆ ಜಾರಪ್ಪ ನಾಯ್ಕ್ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.
ಇದೀಗ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಧಿಸಲಾಗಿದೆ. ಗಾಯಾಳು ನಾರಾಯಣ ನಾಯ್ಕ್ ಅವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ತನಿಖೆ ಮುಂದುವರಿದಿದೆ.