ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಢರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ವಿದ್ಯಾರ್ಥಿಗಳ "ಕ್ಯಾಂಪಸ್ ಅಸ್ಸೆಂಬ್ಲಿ" ಸ್ಲೋಗನ್ ಸ್ಟಡಿ ಕ್ಲಾಸ್ ಜು. 17 ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಝಮೀರ್ ಸಅದಿ ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಅಬ್ದುರ್ರಶೀದ್ ಮಡಂತ್ಯಾರ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ, ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಶಾಹಿನ್ ಮಾಸ್ಟರ್ ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ತರಗತಿ ನಡೆಸಿದರು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯರಾದ ಎಂ.ಶರೀಫ್ ಬೆರ್ಕಳ, ಎಸ್ಸೆಸ್ಸೆಫ್ ದ.ಕ ಈಸ್ಟ್ ಮಾದ್ಯಮ ಕಾರ್ಯದರ್ಶಿ ಪಿ.ಯು ಶರೀಫ್ ನಾವೂರು , ಕ್ಯೂಡಿ ಕಾರ್ಯದರ್ಶಿ ಇಕ್ಬಾಲ್ ಮಾಚಾರ್,ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶಾಫಿ ಮದನಿ, ಕೋಶಾಧಿಕಾರಿ ಹಾರಿಸ್ ಕುಕ್ಕುಡಿ, ಮಾಧ್ಯಮ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ, ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ಅಬ್ಬಾಸ್ ಮುಸ್ಲಿಯಾರ್, ಪಯಾಝ್ ಗೇರುಕಟ್ಟೆ, ತೌಫೀಕ್ ವೇಣೂರು, ಶಮೀರ್ ಗೋಳಿಯಂಗಡಿ, ಡಿವಿಷನ್ ವ್ಯಾಪ್ತಿಯ ಕ್ಯಾಂಪಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ ವಂದಿಸಿದರು.