Posts

ಬೆಳ್ತಂಗಡಿಯಲ್ಲಿ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಶೈಕ್ಷಣಿಕ ಸಮ್ಮೇಳನ

1 min read

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಸರಕಾರಿ ಅನುದಾನ, ಹಳೆ ವಿದ್ಯಾರ್ಥಿಗಳ ,ವಿದ್ಯಾರ್ಥಿಗಳ ಪೋಷಕರ ಸಹಭಾಗಿತ್ವದಲ್ಲಿ 25 ಕೋಟಿ ರೂ. ಅನುದಾನದಲ್ಲಿ ಮಾದರಿ ಶಾಲೆ ನಿರ್ಮಿಸುವ ಯೋಜನೆ ರೂಪಿತವಾಗಿದೆ ಎಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿದರು. 



ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ದ.ಕ ಜಿಲ್ಲಾ ಘಟಕದ ವತಿಯಿಂದ ಸೆ.10 ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ  ನಡೆದ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನೈರುತ್ಯ ಪದವೀಧರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಮಾತನಾಡಿ, ಶಿಕ್ಷಕರನ್ನು ಶಿಕ್ಷಣದ ಹೊರತಾಗಿ ಅನ್ಯ ಕೆಲಸಕ್ಕೆ ಬಳಸುವಂತಿಲ್ಲ. ಆದ್ದರಿಂದ ಬೇರೆ ಕೆಲಸಕ್ಕೆ ನಿರಂತರ ನಿಯೋಜಿಸಲ್ಪಡುತ್ತಿರುವ ವಿಚಾರಗಳ ಬಗ್ಗೆ ಶಿಕ್ಷಕರ ಸಂಘ ಹೋರಾಟ ಮಾಡಬೇಕು ಎಂದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಶಾಸಕ ಎಸ್.ಎಲ್.ಭೋಜೇ ಗೌಡ, ವಿಧಾನ ಪರಿಷತ್ ಶಾಸಕ ಕೆ‌.ಪ್ರತಾಪಸಿಂಹ ನಾಯಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಉಪನಿರ್ದೇಶಕ ಸುಧಾಕರ ಕೆ., ಅಭಿವೃದ್ಧಿ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್., ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ ಬಿ., ಕೊಡಗು ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿ., ಉಡುಪಿ ಜಿಲ್ಲೆ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಕಿರಣ್ ಹೆಗ್ಡೆ

ದ.ಕ. ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ಸ್ಟ್ಯಾನಿ ಜಿ. ತಾವ್ರೊ, ದ.ಕ.ಜಿಲ್ಲಾ ಪ್ರಾ.ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಜ್ಯ ಜತೆ ಕಾರ್ಯದರ್ಶಿ ಜಯಕೀರ್ತಿ ಜೈನ್, ಕ್ಷೇತ್ರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಸರಿ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು‌. ಪದಗ್ರಹಣ ಸಮಾರಂಭ ನಡೆಯಿತು. 

ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ದ.ಕ. ಜಿಲ್ಲಾ ಘಟಕ ಅಧ್ಯಕ್ಷರಾದ ಮಹಮ್ಮದ್ ರಿಯಾಜ್ ಸ್ವಾಗತಿಸಿದರು.

ತಾಲೂಕು ಪದಾಧಿಕಾರಿ ನಿರಂಜನ್ ಜೈನ್ ನಿರೂಪಿಸಿದರು. ಜಿಲ್ಲಾ ಪದಾಧಿಕಾರಿಗಳನ್ನು, ತಾಲೂಕು ಪದಾಧಿಕಾರಿಗಳನ್ನು  ಗೌರವಿಸಲಾಯಿತು‌.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment