Posts

ಬಿಷಪ್ ಲಾರೆನ್ಸ್ ಮುಕ್ಕುಯಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಎಂ.ಪಿ ಅಭ್ಯರ್ಥಿ ಪದ್ಮರಾಜ್

1 min read

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಶನಿವಾರ‌ ಪಕ್ಷದ ಪ್ರಮುಖರ ನಿಯೋಗದೊಂದಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ  ಬಿಷಪ್ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್, ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಭೂ ನ್ಯಾಯಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷ ಜೈಸನ್ ಪಟ್ಟೆರಿಲ್, ಪ್ರಮುಖರಾದ ಶ್ರೀಧರ ಕಳೆಂಜ, ಈಶ್ವರ್ ಭಟ್ ಮಾಯಿಲ್ತೋಡಿ, ಸೆಬಾಸ್ಟಿಯನ್ ಪಿ.ಟಿ, ಅನಿಲ್ ಜಾಕೋಬ್, ರಾಯ್ ಜೋಸೆಫ್ ಪುದುವೆಟ್ಟು, ಪದ್ಮನಾಭ ಸಾಲಿಯಾನ್ ಮಾಲಾಡಿ, ಸಿದ್ದೀಕ್ ಸಾಗರ್ ಮುಂಡಾಜೆ, ನೇಮಿರಾಜ್ ಕಿಲ್ಲೂರು ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು.

ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆಎಸ್‌ಎಮ್‌ಸಿಎ) ಧರ್ಮಪ್ರಾಂತ್ಯ ವ್ಯಾಪ್ತಿಯ ಅಧ್ಯಕ್ಷ ಬಿಟ್ಟಿ ನೆಡುನಿಲಂ ಸ್ವಾಗತಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment